Search
ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಶಿರಸಿಯ ವಿದ್ಯಾರ್ಥಿ
- Ananthamurthy m Hegde
- Dec 30, 2024
- 1 min read

ಉತ್ತರ ಪ್ರದೇಶ ರಾಜ್ಯದ ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಡೆಯಿತು. ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿದ ಉತ್ತರಕನ್ನಡ ಜಿಲ್ಲೆಯ ಶಿರಸಿಯ ಗಾಂಧಿನಗರದ ಶ್ರೇಯಸ್ ನಾಗರವಳ್ಳಿ ಕಥಾ ವಿಭಾಗದಲ್ಲಿ ಬಂಗಾರದ ಪದಕ ಮತ್ತು ಕುಮಿಟೆ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಪಡೆದಿದ್ದಾರೆ. ಜಿಲ್ಲೆಯ ಹೆಸರನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳಗಿದ ವಿದ್ಯಾರ್ಥಿ ಸಾಧನೆಗೆ ಸಂಸದ ವಿಶ್ವೇಶ್ವರ ಹೆಗಡೆ , ಶಾಸಕ ಭೀಮಣ್ಣ ಟಿ ನಾಯ್ಕ, ಡಿಡಿಪಿಆಯ್ ಬಸವರಾಜ ಪಿ ಹಾಗು ಬಿಇಒ ನಾಗರಾಜ ನಾಯ್ಕ ಅಭಿನಂದನೆ ವ್ಯಕ್ತಪಡಿಸಿದ್ದಾರೆ.
Comments